Showing posts with label ಅಧ್ಯಾಯ - 03 : ಶ್ಲೋಕ – 41. Show all posts
Showing posts with label ಅಧ್ಯಾಯ - 03 : ಶ್ಲೋಕ – 41. Show all posts

Thursday, 6 September 2018

ಅಧ್ಯಾಯ - 03 : ಶ್ಲೋಕ – 41

ತಸ್ಮಾತ್ ತ್ವಮಿಂದ್ರಿಯಾಣ್ಯಾದೌ ನಿಯಮ್ಯ ಭರತರ್ಷಭ ।ಪಾಪ್ಮಾನಂ ಪ್ರಜಹಿ ಹ್ಯೇನಂ ಜ್ಞಾನವಿಜ್ಞಾನನಾಶನಮ್ ॥೪೧॥

ತಸ್ಮಾತ್  ತ್ವಮ್  ಇಂದ್ರಿಯಾಣಿ ಆದೌ ನಿಯಮ್ಯ ಭರತ ಋಷಭ     
ಪಾಪ್ಮಾನಮ್  ಪ್ರಜಹಿ ಹಿ ಏನಮ್ ಜ್ಞಾನ ವಿಜ್ಞಾನ ನಾಶನಮ್-

ಅದರಿಂದ , ಓ  ಭರತವಂಶದ ವೀರ, ಮೊದಲು ನೀನು ಇಂದ್ರಿಯಗಳನ್ನು ಹದ್ದಿನಲ್ಲಿರಿಸಿಕೊಂಡು, ಅರಿವನ್ನೂ ಆಳವಾದ ಚಿಂತನ ಶಕ್ತಿಯನ್ನೂ ಹಾಳು ಗೆಡವಬಲ್ಲ ಈ ಪಾಪಿಯನ್ನು ಒದ್ದೋಡಿಸು.

ಇಂತಹ ಮಹಾ ವೈರಿಯನ್ನು ನಾವು ಮೊದಲ ಹಂತದಲ್ಲೇ ನಿಯಂತ್ರಿಸಬೇಕು. ಈ ಶತ್ರುವಿನ ಮೊದಲ ಪ್ರವೇಶ ದ್ವಾರವಾದ ಇಂದ್ರಿಯದಲ್ಲೇ ಅದರ ನಿಯಂತ್ರಣ ಮಾಡಬೇಕು. ನಮ್ಮ ಜ್ಞಾನ(ಶ್ರವಣ)ವನ್ನು, ವಿಜ್ಞಾನ(ಮನನ-ನಿಧಿಧ್ಯಾಸನ)ವನ್ನು ಹಾಳುಗೆಡವಿ, ನಮ್ಮ ಚಿಂತನಾ ಶಕ್ತಿಯನ್ನು ನಾಶಮಾಡಬಲ್ಲ ಈ ಮಹಾ ಪಾಪಿಯನ್ನು ಓದ್ದೊಡಿಸು ಎನ್ನುತ್ತಾನೆ ಕೃಷ್ಣ.  ಆದರೆ ಹೇಗೆ? ಇದಕ್ಕೆ ಯಾರು ಸಹಾಯ ಮಾಡುತ್ತಾರೆ ? ಮುಂದೆ ಕೇಳಿ!

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

तस्मात्त्वमिन्द्रियाण्यादौ नियम्य भरतर्षभ।
पाप्मानं प्रजहि ह्येनं ज्ञानविज्ञाननाशनम्‌॥

इसलिए हे अर्जुन! तू पहले इन्द्रियों को वश में करके इस ज्ञान और विज्ञान का नाश करने वाले महान पापी काम को अवश्य ही बलपूर्वक मार डाल
॥41॥

Tasmaat twam indriyaanyaadau niyamya bharatarshabha;
Paapmaanam prajahi hyenam jnaana vijnaana naashanam.

Therefore, O best of the Bharatas (Arjuna), controlling the senses first, do thou kill thissinful thing (desire), the destroyer of knowledge and realisation!